Friday 14 December 2018

ಕವನ ಗೀಚೋರೆಲ್ಲರ ಪರವಾಗಿ......

ಕವನ ಗೀಚೋರೆಲ್ಲರ ಪರವಾಗಿ......

ನನ್ನ ಬರಹದ
'ನಾನು'
ನಾನೇ ಎಂಬ ಸಂಶಯ ಬೇಡ
ಹಾಗೆಯೇ ಅಲ್ಲಿನ
'ನೀನು'
ನೀನೆಂದು ಅಲ್ಲವೇ ಅಲ್ಲ
ಇಲ್ಲಿಯ
'ಅವನು/ಅವಳು'
ನಾನಲ್ಲವೆಂದು
ಪ್ರಮಾಣಿಸಲಾರೆ
ಮತ್ತು
ನೀನಲ್ಲವೆಂದೂ ನಂಬಬೇಕಿಲ್ಲ
ಕೆಲವೊಮ್ಮೆ
ಹೀಗೆ
ಮತ್ತೆ ಕೆಲವೊಮ್ಮೆ
ಹಾಗೆ
ಯಾರು ಎಂಬ ಕುತೂಹಲ
ಬಿಟ್ಟು ಯಾರೋ ಎಂಬ
ಸಮಾಧಾನ ಒಳ್ಳೆಯದು
ನಿಮಗೂ.....
ನನಗೂ!
                     - ತಲಕಾಡು ಶ್ರೀನಿಧಿ


ಇಂದ: ತಲಕಾಡು ಶ್ರೀನಿಧಿ
      731, 4ನೇ ಅಡ್ಡರಸ್ತೆ, ಬಿ ಇ ಎಂ ಎಲ್ ಬಡಾವಣೆ 3ನೇ ಹಂತ,
      ರಾಜರಾಜೇಶ್ವರಿನಗರ, ಬೆಂಗಳೂರು-560098
      ಮೊ: 97390 96785

No comments:

Post a Comment